Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವದು. ಅವರು ಅದನ್ನು ಬೆಂಕಿಯಿಂದ ಸುಟ್ಟುಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ನೀನು ಬಾಬಿಲೋನಿನ ಅಧಿಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:18
20 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.


ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.


ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.


ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”


ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.


ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು