Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತಾವು ಶತ್ರುವನ್ನು ಮರೆಹೋಗೆನು ಎನ್ನುವುದಾದರೆ ಸರ್ವೇಶ್ವರ ತಮ್ಮ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನೀನು - ಶತ್ರುವನ್ನು ಮರೆಹೊಗೆನು ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಬಾಬಿಲೋನಿನ ಸೈನಿಕರಿಗೆ ಶರಣಾಗತನಾಗದಿದ್ದರೆ ಏನಾಗುವದೆಂಬುದನ್ನು ಯೆಹೋವನು ನನಗೆ ತೋರಿಸಿಕೊಟ್ಟಿದ್ದಾನೆ. ಯೆಹೋವನು ನನಗೆ ಹೀಗೆ ಹೇಳಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ನೀನು ಶರಣಾಗತಿಯನ್ನು ನಿರಾಕರಿಸಿದರೆ, ಯೆಹೋವ ದೇವರು ನನಗೆ ತೋರಿಸಿದ ಮಾತು ಇದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:21
20 ತಿಳಿವುಗಳ ಹೋಲಿಕೆ  

ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’


ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.


ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.


ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು