Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನ ಸಮಸ್ತ ಪತ್ನಿಯರೂ ಕುಮಾರಕುಮಾರ್ತೆಯರೂ ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿವಿುತ್ತ ಬೆಂಕಿಯಿಂದ ಸುಟ್ಟುಹೋಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:23
18 ತಿಳಿವುಗಳ ಹೋಲಿಕೆ  

ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.


ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.


ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.


ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.


“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.


ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.


ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.


ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ.


ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”


“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.


ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು