Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:4
25 ತಿಳಿವುಗಳ ಹೋಲಿಕೆ  

ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.


ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.


ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.


ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು


ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು.


ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.


“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.


ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನೆಮಾಡಬಹುದು.


ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬಿಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು