Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ಹೋಗಿ ಸುಡಾನಿನ ಎಬೆದ್ಮೆಲೆಕನಿಗೆ ಹೀಗೆ ತಿಳಿಸು: “ಈ ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ನಾನು ನುಡಿದ ಮೇಲನ್ನು ಅಲ್ಲ, ಕೇಡನ್ನೇ ಈ ನಗರದ ಮೇಲೆ ಬರಮಾಡುವೆನು. ಅದು ನಿನ್ನ ಕಣ್ಣೆದುರಿಗೇ ಆ ದಿನದಂದು ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:16
24 ತಿಳಿವುಗಳ ಹೋಲಿಕೆ  

ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.


ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.


ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.


ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.


“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ


ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.


ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.


ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”


ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು