Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಮಕ್ಕಳನ್ನು ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣೆದುರಿನಲ್ಲಿಯೇ ಅವನ ಗಂಡುಮಕ್ಕಳನ್ನು ಕೊಲ್ಲಿಸಿದನು. ಚಿದ್ಕೀಯನು ನೋಡುತ್ತಿದ್ದಂತೆಯೇ ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ರಾಜಾಧಿಕಾರಿಗಳನ್ನು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:6
19 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ.


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.


ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.


ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.


ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು.


ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.


ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು.


ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.


ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.


ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.


ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಿಸು.’”


“ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು