Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:11
28 ತಿಳಿವುಗಳ ಹೋಲಿಕೆ  

ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.


ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.


ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.


ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.


ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ.


ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.


ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.


ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.


ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು