Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಬೆಟ್ಟಗಳು ಅದರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹಗುರವಾಗಿ ಅದುರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:24
19 ತಿಳಿವುಗಳ ಹೋಲಿಕೆ  

ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.


ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.


ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.


ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.


ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.


ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.


ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.


ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.


ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.


ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು