Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಸ್ವಾಮಿ ಹೀಗೆಂದರು - “ಆ ದಿನದಂದು ಅರಸರು ಎದೆಗುಂದುವರು, ಅಧಿಪತಿಗಳ ಹೃದಯ ಕುಗ್ಗುವುದು. ಯಾಜಕರು ಸ್ತಬ್ಧರಾಗುವರು; ಪ್ರವಾದಿಗಳು ನಿಬ್ಬೆರಗಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಕಾಲದಲ್ಲಿ ಅರಸನ ಎದೆಯು ಕುಂದುವದು, ಅಧಿಪತಿಗಳ ಹೃದಯವು ಕುಗ್ಗುವದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು. ಅಧಿಪತಿಯ ಹೃದಯವೂ ಕುಗ್ಗುವುದು. ಯಾಜಕರು ಭ್ರಮೆಗೊಳ್ಳುವರು. ಪ್ರವಾದಿಗಳು ಸ್ತಬ್ಧರಾಗುವರು,” ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:9
20 ತಿಳಿವುಗಳ ಹೋಲಿಕೆ  

“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.


ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.


ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.


ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.


ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು