Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತರುವಾಯ ಕಾರೇಹನ ಮಗ ಯೋಹಾನಾನನು ಹಾಗು ಕಾಡುಮೇಡುಗಳಲ್ಲಿ ವಾಸಮಾಡುತ್ತಿದ್ದ ಎಲ್ಲ ಸೇನಾಪತಿಗಳು ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಕಾರೇಹನ ಮಗನಾದ ಯೋಹಾನಾನನೂ ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕಾಡುಮೇಡುಗಳಲ್ಲಿದ್ದ ಯೆಹೂದದ ಸೈನ್ಯಾಧಿಕಾರಿಗಳೂ ಗೆದಲ್ಯನ ಬಳಿಗೆ ಬಂದರು. ಗೆದಲ್ಯನು ಮಿಚ್ಫ ಪಟ್ಟಣದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:13
5 ತಿಳಿವುಗಳ ಹೋಲಿಕೆ  

ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.


ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.


ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.


ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು