Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೆರೆಮೀಯನು ಉತ್ತರಕೊಡದೆ ಇರಲು ನೆಬೂಜರದಾನನು ಅವನಿಗೆ, “ಬಾಬಿಲೋನಿಯದ ಅರಸನು, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಜುದೇಯದ ನಗರಗಳಿಗೆ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆ. ಅವನ ಬಳಿಗೆ ಹೋಗು, ಅವನ ಹತ್ತಿರ ಜನರ ನಡುವೆ ವಾಸಮಾಡುವ ಇಲ್ಲವೆ ಎಲ್ಲಿಗೆ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ - ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.” ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:5
24 ತಿಳಿವುಗಳ ಹೋಲಿಕೆ  

ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.


ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.


ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,


ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.


ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.


ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.


ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.


ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,


ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.


ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,


ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.


ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು