Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇವಿುಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:2
12 ತಿಳಿವುಗಳ ಹೋಲಿಕೆ  

ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.


ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.


ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.


ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.


ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.


ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತ್ಯೆಮಾಡಿದನು.


ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು