Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:10
25 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.”


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.


ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.


ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.


ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.


ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.


“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ,


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”


ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.


ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು