Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಯೆಹೂದದ ಶೇಷವೇ, ಯೆಹೋವ ದೇವರು ನಿಮ್ಮ ವಿಷಯವಾಗಿ ಹೇಳಿದ್ದೇನೆಂದರೆ: ‘ಈಜಿಪ್ಟಿಗೆ ಹೋಗಬೇಡಿರಿ,’ ಇದನ್ನು ಖಚಿತಪಡಿಸಿಕೊಳ್ಳಿ: ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:19
17 ತಿಳಿವುಗಳ ಹೋಲಿಕೆ  

ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.


ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”


ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”


ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”


ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.


ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು