Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಈಜಿಪ್ಟಿನ ದೇವತೆಗಳ ಆಲಯಗಳಿಗೆ ಬೆಂಕಿ ಹೊತ್ತಿಸುವನು. ಅವುಗಳನ್ನು ಸುಟ್ಟು ಆ ದೇವತೆಗಳನ್ನು ಸೆರೆಗೊಯ್ಯುವನು. ಕುರುಬನು ತನ್ನ ಕಂಬಳಿಯನ್ನು ಸೋಸುವಂತೆ ಅವನು ಈಜಿಪ್ಟನ್ನು ಸೋಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಈಜಿಪ್ಟ್ ದೇವರುಗಳ ಆಲಯಗಳಲ್ಲಿ ಬೆಂಕಿ ಹಚ್ಚುವೆನು. ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು. ಕುರುಬನು ತನ್ನ ಉಡುಪನ್ನು ಹೇನುಗಳಿಂದ ಶುದ್ಧೀಕರಿಸುವಂತೆ ಅವನು ಈಜಿಪ್ಟ್ ದೇಶವನ್ನು ಶುದ್ಧವಾಗಿಸಿಕೊಂಡು ಅಲ್ಲಿಂದ ಸಮಾಧಾನವಾಗಿ ಹೊರಟು ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:12
36 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.


ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ.


ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು, ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಹಾಕಿಸಬೇಕು. ಅನಂತರ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ’ ಎಂದು ಪ್ರಕಟಣೆ ಮಾಡಿಸಬೇಕು” ಎಂದು ಹೇಳಿದನು.


ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.


ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.


ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.


ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”


ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.


ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.


ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”


ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.


“‘ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು.


ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.


ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು