Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಾರತಿ ಎತ್ತುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲೆ ದೊಡ್ಡ ಗುಂಪಾಗಿ ನಿಂತಿದ್ದ ಹೆಂಗಸರು, ಹಾಗೂ ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದ ಎಲ್ಲ ಜನರು ಯೆರೆಮೀಯನಿಗೆ ಹೀಗೆಂದು ಉತ್ತರಕೊಟ್ಟರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಐಗುಪ್ತದಲ್ಲಿಯೂ ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:15
14 ತಿಳಿವುಗಳ ಹೋಲಿಕೆ  

ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.


“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.


ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.


ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,


ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.


ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.


ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.


ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,


ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ


ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು