Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪಮಾಡಿ [ಅನ್ಯದೇವತೆಗಳಿಗೆ] ಧೂಪ ಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ ನಡೆಯಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:23
24 ತಿಳಿವುಗಳ ಹೋಲಿಕೆ  

ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು.


ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ.


ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.


ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.


“ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?


ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.


ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.


ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.


ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ,


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.


ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,


“ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.


ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.


ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.


ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.


ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು