Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 45:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು ಎಂದು ಹೇಳಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘“ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಬಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ” ಎಂದು ಹೇಳಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 45:3
28 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.


ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.


ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ.


ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.


ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.


ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.


ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.


“ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?


“ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ?


ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು