Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಐಗುಪ್ತಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಮದ್ದನ್ನು ಉಪಯೋಗಿಸುವದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಈಜಿಪ್ಟಿನ ಮಗಳಾದ ಕನ್ನಿಕೆಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. ಏಕೆಂದರೆ ನಿನಗೆ ಗುಣವಾಗುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:11
15 ತಿಳಿವುಗಳ ಹೋಲಿಕೆ  

ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.


“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು