Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:14
23 ತಿಳಿವುಗಳ ಹೋಲಿಕೆ  

ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.


ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.


“ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.


ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.


ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.


ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:


ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.


ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.


ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು