Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈಜಿಪ್ಟ್ ದೇಶ ದೌಡಾಯಿಸುವ ಶಬ್ದ ಸರಿಯುವ ಸರ್ಪದ ಸಪ್ಪಳಕ್ಕೆ ಸಮಾನ. ಕೊಡಲಿಗಳಿಂದ ಮರಕಡಿಯುವವರಂತೆ ಶತ್ರುಗಳು ದಂಡೆತ್ತಿ ಬಂದು ಬೀಳುವರು ಆ ನಾಡಿನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವದು; [ಶತ್ರುಗಳು] ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅದರ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಜಿಪ್ಟು ಬುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತ್ನಮಾಡುವ ಹಾವಿನಂತಿದೆ. ವೈರಿಗಳು ಬಹಳ ಹತ್ತಿರಕ್ಕೆ ಬಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನ್ನು ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರ ಕಡಿಯುವ ಜನರಂತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದರ ಶಬ್ದವು ಸರ್ಪದಂತೆ ಹೊರಡುವುದು; ಏಕೆಂದರೆ ಅವರು ದಂಡಿನ ಸಂಗಡ ಸಂಚರಿಸಿ, ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:22
13 ತಿಳಿವುಗಳ ಹೋಲಿಕೆ  

ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.


ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.


ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ.


ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. ಅವರ ಕಿವಿ ಕೇಳದಿರುವುದು.


ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.


ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.


ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು