Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೈಲ್ ನದಿಯಂತೆ ಉಬ್ಬಿಕೊಂಡಿರುವ ಇವರು ಯಾರು? ನೈಲ್ ನದಿಯ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಪ್ರವಾಹ ಯಾವುದು? ನೈಲ್ ನದಿಯಂತೆ ಉಬ್ಬಿರುವುದಲ್ಲಾ? ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತಿದೆಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೈಲ್ ನದಿಯಂತೆ ಉಬ್ಬಿರುವದು ಇದೇನು? ನೈಲಿನ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾವದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೈಲ್ ನದಿಯಂತೆ ಯಾರು ಬರುತ್ತಿರುವರು? ಶಕ್ತಿಶಾಲಿಯಾದ ಮತ್ತು ರಭಸದಿಂದ ಹರಿಯುವ ನದಿಯಂತೆ ಯಾರು ಬರುತ್ತಿರುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನೈಲ್ ನದಿಯಂತೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:7
11 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.


ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.


ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.


ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.


ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”


ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು