Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಶ್ವಗಳೇ, ಕುಣಿದಾಡಿ; ರಥಗಳೇ, ರಭಸವಾಗಿ ಓಡಿ! ಹೊರಡಲಿ ಶೂರರು, ಖೇಡ್ಯ ಸನ್ನದ್ಧರಾದ ಸುಡಾನರು, ಲಿಬಿಯಾದವರು ಮುನ್ನುಗ್ಗಲಿ ಧನುರ್ಧಾರಿಗಳಾದ ಲಿಡಿಯದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದರಿಯಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:9
14 ತಿಳಿವುಗಳ ಹೋಲಿಕೆ  

ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಕೂಷ್ ಮತ್ತು ಐಗುಪ್ತವು ಅದರ ಅಪಾರ ಬಲ, ಪೂಟರೂ, ಲೂಬ್ಯರೂ ಅದಕ್ಕೆ ಸಹಾಯಕರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.


ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ


ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.


“ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;


ಮಿಚ್ರಯಿಮ್ಯರಿಂದ ಲೂದ್ಯರೂ, ಅನಾಮ್ಯರೂ, ಲೆಹಾಬ್ಯರೂ, ನಫ್ತುಹ್ಯರೂ,


ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.


ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!


ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.


“‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು