Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗಿರಲು ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ದಿನಗಳು ಬರಲಿವೆ. ಆಗ ನಾನು ‘ಹೊಯ್ಯತಕ್ಕವರನ್ನು’ ಅವರ ಬಳಿಗೆ ಕಳುಹಿಸುವೆನು. ಅವರು ಅದನ್ನು ಹೊಯ್ದುಬಿಡುವರು. ಪಾತ್ರೆಗಳನ್ನು ಬರಿದುಮಾಡುವರು. ಗಡಿಗೆಗಳನ್ನು ಒಡೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಹೀಗೆಂದನು: “ನಿನ್ನನ್ನು ನಿನ್ನ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನ್ನು ಬರಿದಾಗಿಸುವರು. ಅನಂತರ ಆ ಪಾತ್ರೆಗಳನ್ನು ಒಡೆದು ಚೂರುಚೂರು ಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಇಗೋ, ದಿನಗಳು ಬರುವವು” ಎಂದು ಯೆಹೋವ ದೇವರು ಅನ್ನುತ್ತಾರೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು; ಅದರ ಪಾತ್ರೆಗಳನ್ನು ಬರಿದುಮಾಡಿ, ತಮ್ಮ ಬುದ್ದಲಿಗಳನ್ನು ಒಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:12
14 ತಿಳಿವುಗಳ ಹೋಲಿಕೆ  

ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.


ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.


ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.


ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.


ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”


ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.


ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು