Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:33
13 ತಿಳಿವುಗಳ ಹೋಲಿಕೆ  

ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.


ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು