Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:7
39 ತಿಳಿವುಗಳ ಹೋಲಿಕೆ  

ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,


ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,


ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.


ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,


ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;


ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.


ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ಅದಕ್ಕೆ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಕೊಟ್ಟನು,


ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.


ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.


ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,


ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.


ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು