Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ನನಗೆ ಅಂಜುವದಿಲ್ಲವೋ, ನನ್ನೆದುರಿಗೆ ನಡುಗುವದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇವಿುಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:22
29 ತಿಳಿವುಗಳ ಹೋಲಿಕೆ  

ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇರೆಗಳನ್ನು ಗೊತ್ತುಮಾಡಿದಿ.


ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ.


ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ,


ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.


ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.


ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.


ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?


ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ


ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


“ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.”


ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,


ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು