Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:3
45 ತಿಳಿವುಗಳ ಹೋಲಿಕೆ  

ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.


“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.


ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.


ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.


ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


“ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,


ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.


ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.


“ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.


“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.


ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.


ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.


ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.


ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.


ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.


“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು