Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದರೆ ನಿಮ್ಮ ಮಾತೃಭೂಮಿ ಮಾನಭಂಗಕ್ಕೆ ಈಡಾಗುವುದು. ನಿಮ್ಮನ್ನು ಹೆತ್ತ ರಾಜ್ಯ ನಾಚಿಕೊಳ್ಳುವುದು. ಹೌದು, ಅದು ಕಾಡಾಗುವುದು. ಕಗ್ಗಾಡು, ಬೆಂಗಾಡು ಆಗುವುದು. ರಾಷ್ಟ್ರಗಳಲ್ಲಿ ಅದು ಕನಿಷ್ಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ಮಾತೃಭೂವಿುಯು ಮಾನಭಂಗಕ್ಕೆ ಈಡಾಗುವದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಗ ನಿನ್ನ ತಾಯಿಯು ಬಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, ಒಣ ಭೂಮಿಯೂ, ಮರುಭೂಮಿಯೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:12
17 ತಿಳಿವುಗಳ ಹೋಲಿಕೆ  

ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.


ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.


ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.


ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”


ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.


ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.


“ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ.


ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.


ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು