Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವದು; ಬಾಬೆಲನ್ನು ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಅವಳ ಮೇಲೆ ತನ್ನ ಕೋಪವನ್ನು ಪ್ರಕಟಿಸುವನು ಆದ್ದರಿಂದ ಅಲ್ಲಿ ಯಾರೂ ವಾಸಮಾಡಲಾರರು. ಬಾಬಿಲೋನ್ ನಗರವು ಸಂಪೂರ್ಣವಾಗಿ ನಿರ್ಜನವಾಗುವುದು. ಬಾಬಿಲೋನಿನಿಂದ ಹಾದುಹೋಗುವವರೆಲ್ಲ ಭಯಪಡುವರು. ಅದಕ್ಕೆ ಉಂಟಾದ ದುರ್ಗತಿಯನ್ನು ನೋಡಿ ಅವರು ತಮ್ಮ ತಲೆಯಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:13
18 ತಿಳಿವುಗಳ ಹೋಲಿಕೆ  

ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”


ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.


ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.


ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”


“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.


ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.


ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.


ಜನಾಂಗಗಳ ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ; ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು