Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಬಿಲ್ಲುಗಾರರೇ, ನೀವೆಲ್ಲರು ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆಹಾಕಿರಿ. ಬಾಣಗಳನ್ನು ಮಿಗಿಸದೆ ಎಸೆಯಿರಿ. ಅದು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ವಿುಗಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧತೆಗಳನ್ನು ಮಾಡಿರಿ. ಬಿಲ್ಲುಗಾರರೇ, ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಿರಿ. ನಿಮ್ಮ ಬಾಣಗಳಲ್ಲಿ ಒಂದನ್ನೂ ಉಳಿಸಿಕೊಳ್ಳಬೇಡಿರಿ. ಅದು ಯೆಹೋವನ ವಿರುದ್ಧವಾಗಿ ಪಾಪ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಬಿಲ್ಲನ್ನು ಬಗ್ಗಿಸುವವರೇ, ಬಾಬಿಲೋನಿಗೆ ವಿರೋಧವಾಗಿ ಸುತ್ತಲೂ ಯುದ್ಧ ಸಿದ್ಧಮಾಡಿರಿ; ಅದಕ್ಕೆ ಎಸೆಯಿರಿ; ಬಾಣಗಳನ್ನು ಕಡಿಮೆ ಮಾಡಬೇಡಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:14
21 ತಿಳಿವುಗಳ ಹೋಲಿಕೆ  

ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.


ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.


ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.


ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.


“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.


ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.


“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ


“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.


ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!


ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.


ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.


ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.


ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು.


ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.


ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು