Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು; ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಬಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:15
44 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ ಮತ್ತು ಅಶ್ಶೂರ್ಯರಿಗೂ ಅಧೀನರಾದೆವು.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.


ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!


ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.


ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.


ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”


ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.


ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.


ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.


ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.


ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?


ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು