Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:6
36 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.


ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.


ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.


ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.


ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ


ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


“ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.


“ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;


ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.


“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು