Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:33
15 ತಿಳಿವುಗಳ ಹೋಲಿಕೆ  

ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ! ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ, ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.


ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ. ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, ದ್ರಾಕ್ಷಿಯ ಅಲೆಯು ತುಂಬಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ. ಜನಾಂಗಗಳ ದುಷ್ಟತನವು ವಿಪರೀತವಾಗಿದೆ.


ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.


ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.


ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.


ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.


ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ.


ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”


ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು