Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಫರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ [ಎಂಬದಾಗಿ ಅಂದುಕೊಳ್ಳುತ್ತೀರೋ?]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 “ಯೆಹೂದದ ಜನರಾದ ನಾವು ನಾಚಿಕೆಪಟ್ಟೆವು. ಜನರು ನಮ್ಮನ್ನು ಅಪಮಾನಗೊಳಿಸಿದ್ದರಿಂದ ನಾವು ನಾಚಿಕೆಪಟ್ಟಿದ್ದೇವೆ. ಏಕೆಂದರೆ ಯೆಹೋವನ ಆಲಯದ ಪವಿತ್ರ ಸ್ಥಳಗಳಲ್ಲಿ ಅಪರಿಚಿತರು ಪ್ರವೇಶಗೈದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 “ನಾಚಿಕೆ ಪಡುತ್ತೇವೆ, ಏಕೆಂದರೆ ನಿಂದೆಯನ್ನು ಕೇಳಿದ್ದೇವೆ. ಅವಮಾನ ನಿಮ್ಮ ಮುಖಗಳನ್ನು ಮುಚ್ಚಿದೆ. ಏಕೆಂದರೆ ವಿದೇಶಿಗಳು ಯೆಹೋವ ದೇವರ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:51
37 ತಿಳಿವುಗಳ ಹೋಲಿಕೆ  

ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.


ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.


ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.


ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.


ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.


ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು