Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ಅನೇಕ ದಟ್ಟ ದರಿದ್ರರನ್ನೂ ನಗರದಲ್ಲೆ ಉಳಿದವರನ್ನೂ ಮೊದಲೇ ಬಾಬಿಲೋನಿನ ಅರಸನಿಗೆ ಮೊರೆಹೊಕ್ಕವರನ್ನೂ ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದರಿದ್ರರಲ್ಲಿ ಅನೇಕರನ್ನೂ ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೇನಾಧಿಪತಿಯಾದ ನೆಬೂಜರದಾನನು ಜೆರುಸಲೇಮಿನಲ್ಲಿ ಇನ್ನೂ ಉಳಿದುಕೊಂಡಿದ್ದ ಜನರನ್ನು ಬಂಧಿಗಳನ್ನಾಗಿ ಮಾಡಿಕೊಂಡನು. ಈ ಮುಂಚೆ ಬಾಬಿಲೋನಿನ ರಾಜನಿಗೆ ಶರಣಾಗತರಾದವರನ್ನು ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನ್ನು ಸಹ ಅವನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವರಾದ ಕೆಲವರನ್ನೂ, ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:15
7 ತಿಳಿವುಗಳ ಹೋಲಿಕೆ  

ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.


ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.


ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.


ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು