Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:11
22 ತಿಳಿವುಗಳ ಹೋಲಿಕೆ  

“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.


ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.


ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.


ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.


ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.


ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.


ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.


ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.


ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು