Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:15
29 ತಿಳಿವುಗಳ ಹೋಲಿಕೆ  

ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.


ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.


“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.


ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.


ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.


ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.


ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.


“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.


ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.


ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು