Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಓ ನನ್ನ ಮಗಳೇ, ನನ್ನ ಪ್ರಜೆಗಳೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು. ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ, ಬಹು ಕಠಿಣವಾದ ಗೋಳಾಟವನ್ನು ಮಾಡು. ನಾಶ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:26
42 ತಿಳಿವುಗಳ ಹೋಲಿಕೆ  

ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.


ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.


ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.


ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.


ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.


ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.


ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.


ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.


ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.


ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.


ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.


ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.


ನಾನು ಗರಸು ಕಲ್ಲುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ.


ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.


“ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು