Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿಹೇಳುತ್ತಾ ತಿರುಗಾಡುವವರು; ಅವರು [ಬೆಳ್ಳಿಯಲ್ಲಾ,] ತಾಮ್ರ, ಕಬ್ಬಿಣ; ಎಲ್ಲರೂ ಕೇಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರೆಲ್ಲರು ಕಠಿಣ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಕಂಚು, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:28
19 ತಿಳಿವುಗಳ ಹೋಲಿಕೆ  

ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.


ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.


“ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.


ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.


“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.


“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”


“ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.


ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.


ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.


ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು