Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ಕೃತ್ಯಗಳನ್ನೆಲ್ಲಾ ನಡಿಸಿದ ಕಾರಣ ನನ್ನ ನಾಮಕ್ಕೆ ನೆಲೆಯಾಗಿ ನಿಮ್ಮ ಭರವಸಕ್ಕೆ ಆಧಾರವಾದ ಆಲಯಕ್ಕೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:14
28 ತಿಳಿವುಗಳ ಹೋಲಿಕೆ  

‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.


ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?


ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,


ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.


ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.


“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ


“ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.


ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.


ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.


ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.


ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”


ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.


ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು