Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾನು ನಿಮ್ಮನ್ನು ಈ ಸ್ಥಳದಲ್ಲೆ ನೆಲೆಗೊಳಿಸುವೆನು. ನಿಮ್ಮ ಪೂರ್ವಜರಿಗೆ ನಾನು ಶಾಶ್ವತವಾಗಿ ದಯಪಾಲಿಸಿದ ಈ ನಾಡಿನಲ್ಲೆ ನೆಲೆಗೊಳಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪಿತೃಗಳಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:7
12 ತಿಳಿವುಗಳ ಹೋಲಿಕೆ  

ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.


ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.


ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.


ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.


ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು