Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:10
28 ತಿಳಿವುಗಳ ಹೋಲಿಕೆ  

ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.


ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.


ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.


ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗಮಿಸಲಿ!


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.


ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.


ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.


ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು.


ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.


ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು