Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:1
20 ತಿಳಿವುಗಳ ಹೋಲಿಕೆ  

ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.


“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.


ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.


ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,


ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.


ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು