Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವಶಕ್ತ ಸರ್ವೇಶ್ವರ ಸ್ವಾಮಿಯ ಮಾತು : “ನಡೆಯುತ್ತಿರುವ ಕಾರ್ಯಗಳನ್ನು ಆಲೋಚಿಸಿ ನೋಡಿ ರೋದನಾ ಗಾಯಕಿಯರನ್ನು ಕರೆಯಿಸಿರಿ ಅವರಲ್ಲಿ ಜಾಣೆಯರನ್ನು ಕರೆಯ ಕಳಿಸಿರಿ ಅವರೂ ಬಂದು ಸೇರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ - [ನಿಮ್ಮ ಸಂಗತಿಯನ್ನು] ಯೋಚಿಸಿರಿ; ರೋದನಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೆಕಳುಹಿಸಿರಿ, ಅವರು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:17
12 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.


ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.


ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.


ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,


ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.


“ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ,


ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ, ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ” ಇದು ಕರ್ತನಾದ ಯೆಹೋವನ ನುಡಿ.


ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:


ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು