Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಕಟಾ, ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೇದು! ಆಗ ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ಸೂಳೆಗಾರರು, ದ್ರೋಹಿಗಳ ಗುಂಪೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:2
24 ತಿಳಿವುಗಳ ಹೋಲಿಕೆ  

ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.


ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.


ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.


“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.


“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.


ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು