Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:3
43 ತಿಳಿವುಗಳ ಹೋಲಿಕೆ  

ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.


ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.


ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.


ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


“‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.


ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು.


ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.


ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.


ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.


ಆಮೇಲೆ ಆತನು ನನಗೆ, “ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ” ಎಂದು ಹೇಳಿದನು.


ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು