Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನೀವು ನನ್ನ ಮಾತನ್ನು ಕೇಳಿದರೆ ನಿಮ್ಮ ದೇಶದ ಉತ್ತಮ ಫಸಲುಗಳಿಂದ ಆನಂದಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:19
22 ತಿಳಿವುಗಳ ಹೋಲಿಕೆ  

ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.


ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.


“ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.


“ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,


ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.


ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.


ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು