Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:20
24 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”


ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.


ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು.


ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


“ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,


ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.


ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


“ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,


“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.


ನೀನು ಅವರಿಗೆ ಅಪ್ಪಣೆ ಕೊಡದೆ ಇನ್ನೂ ಅವರನ್ನು ತಡೆದರೆ,


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು