Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:21
31 ತಿಳಿವುಗಳ ಹೋಲಿಕೆ  

ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.


ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!


ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”


ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?


ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.


ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.


ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.


ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,


ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.


ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.


ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.


ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು